
ಜಮ್ಮು ಮತ್ತು ಕಾಶ್ಮೀರದ (Jammu and Kashmir) ಶೋಪಿಯಾನ್ ಜಿಲ್ಲೆಯ ಶುಕಲ್ ಕೆಲ್ಲರ್ ಎಂಬ ಪ್ರದೇಶದಲ್ಲಿ ಮಂಗಳವಾರ ಭದ್ರತಾ ಪಡೆಗಳು ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಮೂವರು ಭಯೋತ್ಪಾದಕರು ಹತ್ಯೆಗೀಡಾಗಿದ್ದಾರೆ.
ಭಯೋತ್ಪಾದಕರು ಅಡಗಿರುವ ಮಾಹಿತಿ ಮೇರೆಗೆ ಭದ್ರತಾ ಸಿಬ್ಬಂದಿ ಪ್ರದೇಶವನ್ನು ಸುತ್ತುವರಿದು ಕಾರ್ಯಾಚರಣೆ ನಡೆಸಿದರು. ಈ ವೇಳೆ ನಡೆದ ಎನ್ಕೌಂಟರ್ನಲ್ಲಿ ಮೂರು ಮಂದಿ ಭಯೋತ್ಪಾದಕರು ಮೃತರಾದರು.
ಮೃತರಲ್ಲಿ ಲಷ್ಕರ್-ಎ-ತೈಬಾ ಸಂಘಟನೆಯ ಮುಖ್ಯ ಕಮಾಂಡರ್ ಶಾಹಿದ್ ಕುಟ್ಟೈ ಮತ್ತು ಮತ್ತೊಬ್ಬ ಭಯೋತ್ಪಾದಕ ಅದ್ನಾನ್ ಶಫಿ ಇದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೂರನೇ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ.