back to top
20.4 C
Bengaluru
Tuesday, October 7, 2025
HomeKarnatakaPakistan ದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ವೈರಲ್; BJP ಕಿಡಿ

Pakistan ದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ವೈರಲ್; BJP ಕಿಡಿ

- Advertisement -
- Advertisement -

ಸಿಎಂ ಸಿದ್ದರಾಮಯ್ಯ (CM Siddaramaiah) ಭಾನುವಾರ ಪಾಕಿಸ್ತಾನದ (Pakistan) ಪ್ರಮುಖ ಸುದ್ದಿವಾಹಿನಿಗಳಲ್ಲಿ ಕಾಣಿಸಿಕೊಂಡರು. “ಪಾಕಿಸ್ತಾನದ ವಿರುದ್ಧ ಯುದ್ಧಕ್ಕೆ ಭಾರತದೊಳಗೇ ವಿರೋಧವಿದೆ” ಎಂದು ಹೇಳಿರುವ ಹಿನ್ನೆಲೆಯಲ್ಲಿ, ಪಾಕ್ ಸುದ್ದಿವಾಹಿನಿಗಳು ಅವರ ಫೋಟೋ ಪ್ರಸಾರ ಮಾಡಿದೆ.

ಈ ವಿಷಯಕ್ಕೆ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಅವರು ಸಿದ್ದರಾಮಯ್ಯನನ್ನು “ಪಾಕಿಸ್ತಾನ ರತ್ನ” ಎಂದು ವ್ಯಂಗ್ಯವಾಡಿದ್ದಾರೆ. ಪಾಕಿಸ್ತಾನದ ಸುದ್ದಿವಾಹಿನಿಗಳಲ್ಲಿ ಸಿದ್ದರಾಮಯ್ಯನವರನ್ನು “ವಜೀರ್ ಇ ಅಲಾ” ಎಂದು ಉಲ್ಲೇಖಿಸಲಾಗಿದೆ.

ಸಿದ್ದರಾಮಯ್ಯನವರು “ನಾವು ಯುದ್ಧಕ್ಕೆ ವಿರೋಧಿ” ಎಂದಿಲ್ಲ, ಆದರೆ ಯುದ್ಧ ಪರಿಹಾರ ಅಲ್ಲ, ಶಾಂತಿ ಮುಖ್ಯ ಎಂದು ಹೇಳಿದ್ದಾಗಿ ಸ್ಪಷ್ಟನೆ ನೀಡಿದ್ದಾರೆ. ಭದ್ರತೆ ವೈಫಲ್ಯಕ್ಕೂ ಕೇಂದ್ರ ಸರ್ಕಾರ ಜವಾಬ್ದಾರಿಯಿದೆ ಎಂದು ಅವರು ಹೇಳಿದ್ದಾರೆ.

ಇದಕ್ಕೂ ಮುನ್ನ, ಸಿಎಂ ಶಾಂತಿ ಕಾಪಾಡಲು ಕೇಂದ್ರ ಸರಕಾರದಿಂದ ಸೂಕ್ತ ಭದ್ರತಾ ಕ್ರಮಗಳ ಅಗತ್ಯವಿದೆ ಎಂದು ಹೇಳಿದ್ದಾರೆ. ಪಾಕಿಸ್ತಾನ ಸುದ್ದಿವಾಹಿನಿಗಳು ಅವರ ಹೇಳಿಕೆಯನ್ನು ವಿಸ್ತೃತವಾಗಿ ಪ್ರಸಾರ ಮಾಡಿದ್ದು, ಆನ್‌ಲೈನ್‌ನಲ್ಲಿ ಈ ವಿಡಿಯೋಗಳು ವೈರಲ್ ಆಗಿವೆ.

ಬಿಜೆಪಿ ನಾಯಕರು ತೀವ್ರ ಟೀಕೆ ಮಾಡಿದ್ದಾರೆ. ಆರ್.ಅಶೋಕ್ ಅವರು, ಸಿದ್ದರಾಮಯ್ಯ ಪಾಕಿಸ್ತಾನದ ಪರ ಶಾಂತಿಯತರಾಗಿದ್ದು, ಅವರಿಗೆ ನಿಶಾನ್-ಎ-ಪಾಕಿಸ್ತಾನ ಪ್ರಶಸ್ತಿ ನೀಡಿದರೂ ಅಚ್ಚರಿಯಿಲ್ಲ ಎಂದಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು, ಸಿದ್ದರಾಮಯ್ಯನವರ ಹೇಳಿಕೆಗಳು ಜನರ ಮನದಲ್ಲಿ ಅವರು ರಾಷ್ಟ್ರಭಕ್ತರೋ ಅಥವಾ ಪಾಕಿಸ್ತಾನ ಪರ ವ್ಯಕ್ತಿಯೋ ಎಂಬ ಅನುಮಾನ ಹುಟ್ಟಿಸುತ್ತಿವೆ ಎಂದು ಟೀಕಿಸಿದ್ದಾರೆ.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page