Saturday, April 20, 2024
HomeKarnatakaಕರ್ನಾಟಕದಲ್ಲಿ ಯಶಸ್ವಿನಿ ಯೋಜನೆ ಪುನರಾರಂಭ

ಕರ್ನಾಟಕದಲ್ಲಿ ಯಶಸ್ವಿನಿ ಯೋಜನೆ ಪುನರಾರಂಭ

Subramanya, Dakshina Kannada : ಮೂರು ವರ್ಷಗಳ ಹಿಂದೆ ಸ್ಥಗಿತಗೊಂಡಿದ್ದ ಯಶಸ್ವಿನಿ ಆರೋಗ್ಯ ವಿಮಾ ಯೋಜನೆ (Yeshasvini Health Insurance Scheme) ಅಕ್ಟೋಬರ್ ನಿಂದ ಮರು ಜಾರಿ ಮಾಡಲಾಗುವುದು ಎಂದು ಸಚಿವ ಎಸ್.ಟಿ. ಸೋಮಶೇಖರ್ (S. T. Somashekhar) ತಿಳಿಸಿದ್ದಾರೆ.

ಕುಕ್ಕೆ ಸುಬ್ರಮಣ್ಯದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಸಚಿವರು ” ಯಶಸ್ವಿನಿ ಆರೋಗ್ಯ ವಿಮಾ ಯೋಜನೆ ಆರಂಭಿಸುವಂತೆ ಸಾರ್ವಜನಿಕರು ಒತ್ತಾಯಿಸುತ್ತಿದ್ದು ಅಕ್ಟೋಬರ್ 2 ಗಾಂಧಿ ಜಯಂತಿ (Gandhi Jayanthi) ಯಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ (Basavaraj Bommai) ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಈ ಯೋಜನೆಗೆ ಚಾಲನೆ ನೀಡಲಿದ್ದಾರೆ” ಎಂದು ತಿಳಿಸಿದರು.

ಯಶಸ್ವಿನಿ ಯೋಜನೆ ಮರು ಜಾರಿಯಾದರೆ ಸಹಕಾರ ಕ್ಷೇತ್ರದ 41 ಲಕ್ಷ ಸದಸ್ಯರು ಮತ್ತು ಅವರ ಕುಟುಂಬವನ್ನು ಒಳಗೊಂಡ ರಾಜ್ಯದ 1.5 ಕೋಟಿ ಜನರು ಈ ಯೋಜನೆಯ ಲಾಭ ಪಡೆಯಲಿದ್ದಾರೆ. ಈ ಯೋಜನೆ ಮೂಲಕ ವೈದ್ಯಕೀಯ ಕ್ಷೇತ್ರದ 14 ವಿಭಾಗಗಳಲ್ಲಿ ಗುರುತಿಸಿದ 295 ಕಾಯಿಲೆಗಳ 823 ಶಸ್ತ್ರಚಿಕಿತ್ಸೆಗೆ ನಗದು ರಹಿತ ಸೌಲಭ್ಯ ಪಡೆಯಬಹುದು ಮತ್ತು ಈ ಮೊದಲಿದ್ದ 905 ಯಶಸ್ವಿನಿ ವರ್ಕ್ ಆಸ್ಪತ್ರೆಗಳನ್ನು 1800 ಕ್ಕೆ ಹೆಚ್ಚಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಗ್ರಾಮೀಣ ಪ್ರದೇಶದಲ್ಲಿ ಯಶಸ್ವಿನಿ ಯೋಜನೆಯಡಿಯಲ್ಲಿ 1 ಬಾರಿ ಚಿಕಿತ್ಸೆಗೆ ಒಳಗಾದರೆ 1.25 ಲಕ್ಷ ರೂ. ಮಿತಿ ಹಾಗೂ ಒಂದಕ್ಕಿಂತ ಹೆಚ್ಚು ಬಾರಿ ಚಿಕಿತ್ಸೆಗೆ ಒಳಗಾದರೆ 2 ಲಕ್ಷ ರೂ.ವರೆಗೆ ನಗದು ರಹಿತ ಶಸ್ತ್ರ ಚಿಕಿತ್ಸಾ ಸೌಲಭ್ಯ ಪಡೆಯಬಹುದು ಎನ್ನಲಾಗಿದೆ.

- Advertisement -

For Daily Updates WhatsApp ‘HI’ to 7406303366

RELATED ARTICLES

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
- Advertisment -

Most Popular

Karnataka

India

You cannot copy content of this page